Posted by: uniquesupri on: December 22, 2008
ಕತ್ತಿವರಸೆಯನ್ನು ಕಲಿಯುವುದರಲ್ಲಿ ಆಸಕ್ತನಾಗಿದ್ದ ಯುವಕನೊಬ್ಬ ಝೆನ್ ಗುರುವಿನ ಬಳಿಗೆ ಬಂದ.
"ನಾನು ನಿಮ್ಮ ಬಳಿ ಕತ್ತಿವರಸೆಯ ಕೌಶಲ ಕಲಿಯಬೇಕೆಂದಿದ್ದೇನೆ. ಪರಿಣತಿಯನ್ನು ಪಡೆಯಲು ಎಷ್ಟು ಕಾಲ ಬೇಕಾದೀತು?" ಎಂದು ಕೇಳಿದ.
ತೀರ ಸಹಜವೆಂಬಂತೆ ಗುರು "ಹತ್ತು ವರ್ಷ" ಎಂದ.
"ನನಗೆ ಬೇಗ ಕಲಿಯಬೇಕೆಂದು ಇಷ್ಟ. ಪ್ರತಿ ದಿನವೂ, ದಿನಕ್ಕೆ ಹದಿನೆಂಟು ಗಂಟೆಯ ಕಾಲ ಬೇಕಾದರೆ ಅಭ್ಯಾಸ ಮಾಡಬಲ್ಲೆ. ಹಾಗಾದರೆ ಎಷ್ಟು ಕಾಲ ಹಿಡಿದೀತು?" ಆತುರದಿಂದ ಯುವಕ ಕೇಳಿದ.
ಗುರು ಒಂದು ಕ್ಷಣ ಯೋಚನೆ ಮಾಡಿ "ಇಪ್ಪತ್ತು ವರ್ಷ" ಎಂದ.
………………………………………..
ಶಿಷ್ಯನೊಬ್ಬ ಗುರುವನ್ನು ಕೇಳಿದ: "ಗುರುವೇ, ಜ್ಞಾನೋದಯ ಎಂದರೆ ಏನು?"
ಗುರು ಹೇಳಿದ: "ಹಸಿವಾದಾಗ ಉಣ್ಣು, ಬಾಯಾರಿದಾಗ ನೀರು ಕುಡಿ, ನಿದ್ರೆ ಬಂದಾಗ ಮಲಗು"
………………………………………..
ಗುರು ಗ್ಯುಡೊನನ್ನು ಚಕ್ರವರ್ತಿ ಕೇಳಿದ.
‘ಜ್ಞಾನಿಯಾದವನು ಸತ್ತಮೇಲೆ ಏನಾಗುತ್ತದೆ?’
‘ನನಗೇನು ಗೊತ್ತು?’ ಅಂದ ಗ್ಯುಡೊ.
‘ಗೊತ್ತಿರಬೇಕು, ನೀವು ಗುರು’ ಅಂದ ಚಕ್ರವರ್ತಿ.
‘ನಿಜ. ಆದರೆ ಸತ್ತಿಲ್ಲ’ ಎಂದ ಗ್ಯುಡೊ.
………………………………………..
ಒಂದು ದಿನ ಚಾಂಗ್ ತ್ಸು ಮತ್ತು ಅವನ ಗೆಳೆಯ ನದಿಯಪಕ್ಕದಲ್ಲಿ ನಡೆಯುತ್ತಿದ್ದರು.
‘ಈಜುತ್ತಿರುವ ಮೀನು ನೋಡು, ಎಷ್ಟು ಖುಷಿಯಾಗಿವೆ’ ಅಂದ ಚಾಂಗ್ ತ್ಸು.
‘ನೀನು ಮೀನಲ್ಲ. ಆದ್ದರಿಮದ ಅವು ಖುಷಿಯಾಗಿವೆಯೋ ಇಲ್ಲವೋನಿನಗೆ ಗೊತ್ತಾಗುವುದು ಸಾಧ್ಯವಿಲ್ಲ’ ಅಂದಗೆಳೆಯ.
‘ನೀನು ನಾನಲ್ಲ, ಮೀನು ಖುಷಿಯಾಗಿವೆ ಅನ್ನುವುದು ನನಗೆಗೊತ್ತಿಲ್ಲ ಅಂತ ನಿನಗೆ ಹೇಗೆ ಗೊತ್ತಾಯಿತು?’ ಅಂದ ಚಾಂಗ್ ತ್ಸು.
Recent Comments