ಕಲರವ

Archive for the ‘ಕವಿತೆಗೊಂದು ತಾವು’ Category

- ರಂಜಿತ್ ಅಡಿಗ, ಕುಂದಾಪುರ.
ಒಮ್ಮೆಯಾದರೂ ಈ ಸಂಬಂಧಗಳಾಳಕ್ಕೆ
ಇಣುಕಲೇ ಬೇಕು
ಅದು ಈರುಳ್ಳಿ ಸಿಪ್ಪೆ ಸುಲಿದಂತೆ
ಮೊನ್ನೆಮೊನ್ನೆಯವರೆಗೂ ತನ್ನ
ಜೀವಕ್ಕಿಂತ ಹೆಚ್ಚು ಪ್ರೀತಿಸ್ತೀನಿ ಅಂತ
ಒದ್ದೆ ಕಣ್ಣಾಲಿಗಳಿಂದ ಹೇಳಿದ ಗೆಳತಿ
ಕಮ್ಮಿ ಮಾರ್ಕ್ಸು ಬಂದರೆ
ಮನೆಯಿಂದ ಓಡಿಸ್ತೀನಿ ಎಂದು
ಸಿಕ್ಕಾಪಟ್ಟೆ ಬೈದ ಅಪ್ಪ
ಕ್ಯಾಂಪಸ್ಸಿನಲ್ಲಿ ಕೆಲಸ
ಸಿಗಲಿಲ್ಲವೆಂದೊಮ್ಮೆ ಸುಮ್ಮನೆ
ಪರೀಕ್ಷೆ ಮಾಡಲು ಹೇಳಿದ ಕೂಡಲೇ
ಕೆಲಸ ಸಿಗದವನನ್ನು ಮದ್ವೆಯಾಗ್ತೀನಂತ
ಹ್ಯಾಗೆ ತನ್ನಪ್ಪನನ್ನು ಒಪ್ಪಿಸಬೇಕು
ನೀ ನನ್ನ ಮರೆಯಲೇಬೇಕು
ಎಂದು ತನ್ನ ಜೀವವನ್ನೇ ಕಡೆಗಣಿಸಿದಳಾಕೆ
ಮನೆಯನ್ನು ಒತ್ತೆಯಿಡೋಣ
ರಿಟಾಯರ್ಮೆಂಟ್ ಹಣವೂ ಬರಬಹುದು
ಸ್ವಂತ ಬಿಸಿನೆಸ್ಸು ಆರಂಭಿಸು ಮಗನೇ ಅನ್ನುವನು ಅಪ್ಪ
ಎರಡೂ ಮಾತಿಗೂ ಉಕ್ಕಿದ್ದು
ಕಣ್ಣೆದುರಿಗಿನ
ಪರದೆ ಜಾರಿಸೋ ಕಣ್ಣಿರೇ.

ವಾರಾಂತ್ಯದ ಕವಿತೆ: ಬಲೂನು!

Posted by: ರಂಜಿತ್ on: July 18, 2009

-ರಂಜಿತ್ ಅಡಿಗ , ಕುಂದಾಪುರ.
ಮೂರು ಕಾಸಿತ್ತು ಕೊಂಡ ವಸ್ತು
ಎಲ್ಲೆಂದರೆ ಅಲ್ಲೇ ಬಿದ್ದುಕೊಂಡಿತ್ತು
ಎರಡು ಹನಿ ಉಸಿರು ತುಂಬಿದರೆ
ತನ್ನೊಳಗನು ಅರಿಯಿತು, ಎಚ್ಚೆತ್ತಿತು ಆತ್ಮ

ಉಸಿರಿಗೆಲ್ಲ ಬೆಲೆಯಿಲ್ಲ ಎಂದು ನೊಂದು
ಸಾಯಿಸಿಕೊಳ್ಳುವವರನು ನಾಚಿಸುತ್ತ
ಸ್ವತಃ ಬೆಲೆಯ ಮಟ್ಟವನು ಸೂಚಿಸುತ್ತ
ಎತ್ತರೆತ್ತರ ಏರುತಿತ್ತು,ಆಗಸವನೇ ತಲುಪುವತ್ತ
ಯಮನ ಜೋಳಿಗೆಯಂತೆ ಗರ್ಭದೊಳು
ಮುದುಡಿದ ಮಗುವಿನಂತೆ
ತೇಲುತ್ತ ಹಾರುತ್ತ ಆಗುತ್ತ ಚುಕ್ಕಿ
ಸುತ್ತಲಿನ ಜನರೆಲ್ಲ ನೋಡಿ
ಉಸಿರು ಹೋಯಿತು, ಉಸಿರು ಹೋಯಿತು
ಎಂದೆಸೆದರು ಉದ್ಗಾರವನು!
****

-ಜ್ಞಾನಮೂರ್ತಿ, ಬೆಂಗಳೂರು.
ಮಣ್ಣಲ್ಲಿ ಮಣ್ಣಾಗಿ ಹೋಗುವ ಮುನ್ನ,ಧರಿತ್ರಿಯ ಸಂಗವ ತೊರೆಯುವ ಮುನ್ನತಾಯ್ಮಡಿಲಿನಲಿ ಶಿರವನಿರಿಸಿ ನಾ ಅಲೆದಿರುವಾನನ್ನ ನೆನಪಿನಂಗಳವನ್ನ ತವೆಯುತ್ತತಾಯ್ಮಡಿಲ ಸೇರಿದ ನೆನಪಾಗಿ,
ಬಾಲ್ಯದ ತುಂಟಾಟ ಕೈಬೀಸಿದಂತಾಗಿಗೆಳೆಯರ ಜಗಳ ಸಂಧಾನಗಳು ಕೂಗಿ ಕರೆದಂತಾಗಿಕೈಹಿಡಿದ ಕೈಯನ್ನು ಹಿಡಿದು ನಡೆಸುವ ಹಂಬಲವಾಗಿಮನಸು ಸಾವಿನ ದಾರಿಯಲಿ ತಾ ಹಿಂದೆ ನೋಡುತಿರೆ,ವಾಸ್ತವಕೆ ಬಂದು ನಾ ಸುತ್ತ ನೋಡುತಿರೆತೇವದಿ೦ದೆಲ್ಲರ ಕಂಗಳಲಿ ನನ್ನ ಬಿಂಬಕಂಡು ಸಂತಸಗೊಂಡೆ ನಾ ಈ ಕ್ಷಣ
ಮಾತೃದೇವತೆಯ ಮಡಿಲ ತೊರೆಯಲಾಗುತ್ತಿಲ್ಲಮಡದಿಯ ಸಿಂಧೂರ ನೋಡಲಾಗುತ್ತಿಲ್ಲ.ಕಾಲಚಕ್ರವ ಹಾಗೆ ಹಿಂದೆ ಸರಿಸುವ ಆಸೆ,ಅಮ್ಮಾ ನಿನ್ನ ಮಡಿಲಲಿ ನಾ ಮತ್ತೆ ಶಿಶುವಾಗುವಾಸೆಬಾಳೆಂಬ ನಾಣ್ಯದ [...]

 - ಜ್ಞಾನಮೂರ್ತಿ, ಬೆಂಗಳೂರು.

 
ನಿನ್ನ ಒಳ ಜಗತ್ತಿನಲ್ಲೆಲ್ಲ ಮೂಡಿರುವ ನನ್ನುಸಿರ
ಹೆಜ್ಜೆಗಳು 
ಆತನ ಸ್ಪರ್ಶಕ್ಕೆ ಮಾಸುವ ಮುನ್ನ ನೋವ
ಪೆಟ್ಟಿಗೆಯಲ್ಲಿ ಬಚ್ಚಿಟ್ಟುಕೋ
ಏಕಾಂತದಿ ನನ್ನ ಜೊತೆ ಮಿಂದು ಬಂದ
ಮನಸ್ಸನ್ನು
ಸಪ್ಪಳವಿಲ್ಲದೆ ಒಳಕರೆದುಕೋ
ಆತ ಎಚ್ಚರವಾಗುವ ಮುನ್ನ ಮನಸ್ಸಿನ
ಮೈತೊಳೆದು
ಹೊಸ ಬಟ್ಟೆ ತೊಡಿಸಿಬಿಡು
ನನ್ನ ನೆನಪುಗಳ ನಿನ್ನ ಮಗುವಿನ
ಆಟಿಕೆಗಳಾಗಿಸುವುದಾದರೆ
ಅವುಗಳೆಲ್ಲ ಆತನ ಕಾಲ್ತುಳಿತಕ್ಕೆ ಸಿಗದಂತೆ
ಎಚ್ಚರವಹಿಸು!
ನಿನ್ನೊಳಗಣ ನನ್ನ ನೆನಪ ಮೊಟ್ಟೆಗಳಿಗೆ
ಕಾವುಕೊಡುವುದ
ನಿಲ್ಲಿಸಿಬಿಡು
ಇಲ್ಲವಾದರೆ ಮೊಟ್ಟೆಯೊಡೆದ ಜೀವಗಳು ಆತನಿಗೆ
ಸತ್ಯ ಹೇಳಿಬಿಟ್ಟಾವು!
ಹರಿದ ನನ್ನ ನೆನಪುಗಳ ನೀ ಹೊಲೆಯುವಾಗ
ಆತ
ಸೂಜಿಮೊನೆಯಾಗಿ ಚುಚುತ್ತಾನೆ
ಈ ನೋವಲ್ಲೂ ನಾನು ನಿನ್ನ ಕೈ ಕೌದಿಯಾಗಿ
ಅರಳುತ್ತೇನೆ!

ಅಮ್ಮನ ಬುತ್ತಿ ಬೇರಿನಲ್ಲಿ!!

Posted by: ರಂಜಿತ್ on: June 25, 2009

- ನೂತನ್ ಹೆಚ್. ಬಿ., ಹಾಲಾಡಿ.

ಬೇರಿನಲ್ಲಿ ಬುತ್ತಿ ಕಟ್ಟಿಟ್ಟಿದ್ದಳು ಅಮ್ಮ
ಮರಕೆಲ್ಲಿ ಗೊತ್ತು?
ಎಲ್ಲಿಂದಲೋ ಬಂದ ರವಿಕಿರಣಕ್ಕೆ
ಮುಖ ಮಾಡಿತ್ತು!
ಮೈ ಎಲ್ಲ ಮನಮಾಡಿ ಹಸಿರುಗನಸುಗಳ ಹೊತ್ತು
ಮಂದ ಮಾರುತಕ್ಕೆ ಮೈಯ್ಯ ಮರೆತಿತ್ತು!
ಬಳುಕುವ ಬಳ್ಳಿಗೆ ಸೋತು ಅಪ್ಪಿ ಬೆಳೆದಿತ್ತು!
ಬಣ್ಣ ಬಣ್ಣಗಳ ಹಕ್ಕಿಗಳ ಸಂಸಾರ ಮೈಎಲ್ಲಾ ಹೊತ್ತು
ತಾನೊಬ್ಬನೆ ಆಕಾಶಕ್ಕೇಣಿಯಾಗುವವನೆಂದು
ಉಬ್ಬಿ ನಿಂತಿತ್ತು!
ಆಗಸವೂ ಸಿಗದೆ ಅಳುಕಿ ತಡಕಾಡಿ
ಬೇರೂ ಸಿಗದೇ ಬುತ್ತಿಯೂ ಸಿಗದೆ ಕಂಗಾಲಾಗಿತ್ತು!
ಮತ್ತೆ ಬೇರನ್ನರಸಿ ಕೆಳಗಿಳಿದಿತ್ತು!
ತಾನು ತಂದಿದ್ದ ಬುತ್ತಿ ಗೆದ್ದಲ ಗೂಡಿನಲ್ಲಿ ಜೀರ್ಣವಾಗಿತ್ತು
ಬೇರುಗಳ ಸಂಧಿಯಲ್ಲಿ ಎಲ್ಲೋ ಹಣ್ಣಾಗಿದ್ದ ಈಗ
ಮಣ್ಣಾಗಿದ್ದ ಅದರಮ್ಮ ಹೇಳಿದ್ದು
ಆತ್ಮರತಿಗೆ ಮಾತ್ರ ಕೇಳುವಂತಿತ್ತು;
’ಮಗುವೇ, ನೀನಿನ್ನೂ ಬೆಳೆಯಬೇಕಿತ್ತು!’

ವಾರದ ಕವಿತೆ: ಬಾಳೆಂಬ ಚೇತನ..!

Posted by: ರಂಜಿತ್ on: June 20, 2009

-ರೂಪಾ ಸತೀಶ್, ಬೆಂಗಳೂರು.
 

ಜೀವತಾಣದ ಜನಜಾತ್ರೆಯ ನಡುವೆ
ಕಳೆದು ಅಳೆದು ಪ್ರತಿ ಘಳಿಗೆ,
ವಿರಸದ ಏರಿಳಿತಗಳಲ್ಲಿ ಬೇಸತ್ತು ಬಡವಾಗಿದ್ದರು ಮನ….
ಜಿನುಗುತಿರಲಿ ಬಾಳೆಂಬ ಚಿಮ್ಮುವ ಚೇತನ !!
ಬಯಸಿ ಬಯಸದೆಯೋ ಹೃದಯಗಳಿಗೆ
ಆಗಿ ಹೋಗುವ ನಿಶ್ಚಿತ ಪೆಟ್ಟು ಕಲೆಗಳು,
ಅಗ್ನಿಕುಂಡದ ನೋವನ್ನು ನುಂಗಿ ಬೆಂದರು ಜೀವ….
ಬೆಳಗುತಿರಲಿ ಬಾಳೆಂಬ ಹುರಿದುಂಬಿದ ಚೇತನ !!
ಬದುಕಿನ ಲೆಕ್ಕಾಚಾರಗಳು ತಲೆಕೆಳಗಾಗುತ್ತ
ಬವಣೆಗಳನ್ನರಿತ ಗಣಿತಶಾಸ್ತ್ರಜ್ಞ ಮೇಲೆ ಕುಂತು ನೋಡುತ್ತಾ,
ನಿನ್ನ ಗಣನೆ ತಪ್ಪು ತಪ್ಪು ಎಂದು ಪ್ರತೀಸಾರಿ ಸಾರಿದರೂ….
ಆರದಿರಲಿ ಬಾಳೆಂಬ ಪ್ರಜ್ವಲಿತ ಚೇತನ !!
ತುಳಿದು ಅಳಿದು ಹೊಸಕಿಹಾಕುವ ಮಾತುಗಳ ಗಾಣ
ಹರಿದು ಒಗೆದು ಜಡಿದುಹಾಕುವ ಮನುಜಕುಲದ ತಾಣ,
ಅಲ್ಲಲ್ಲಿ ಬೀಳುವ [...]

ವಿವೇಕ್ ಘಾಟೆ, ಮಂಗಳೂರು
vive.1990@gmail.com

ಬಾರದ ಮಳೆಯ.. ಸುರಿಯುತ್ತಾ ಸ್ಪರ್ಶಿಸುವ ಹನಿಗಳ ಮಧ್ಯ, ತೆರೆದಿದೆ ನೊಂದ ಮನಗಳ ಸಾಹಿತ್ಯವನ್ನು ಹೊತ್ತ ಗದ್ಯ!
ಪುಟ ಪುಟವೂ ಮೆದುವಾಯಿತು ಆವರಿಸಿದ ದಟ್ಟ ನೀಲಿ ಆಗಸದ ಕೆಳಗೆ, ಹರಿದಾಡಿ, ಗೋಳಾಡಿ ಬೇಯುತಲಿದೆ ಕನಸುಗಳು [...]

ಮನದ ಹನಿ

Posted by: uniquesupri on: June 11, 2009

ರಂಜಿತ್ ಅಡಿಗ, ಕುಂದಾಪುರ
adiga.ranjith@gmail.com

ಅವಳು ಆಗಸ
ಸುಮ್ಮನೆ ಏಣಿ ಕಟ್ಟದಿರು ಅಂದರು
ನನಗೆ
ರೆಕ್ಕೆ ಮೂಡುತಿತ್ತು,
ಅವಳು ನಿನಗೆ ಸರಿಯಾದವಳಲ್ಲ
ಎಂದರು,
ತಪ್ಪುಗಳನ್ನು ಮಾಡುವುದು
ತಪ್ಪಲ್ಲವೆನಿಸತೊಡಗಿತು!
…………………………………………………………………………

ರಂಜಿತ್ ಅಡಿಗ, ಕುಂದಾಪುರ
adiga.ranjith@gmail.com
ಅಪರೂಪವಾಗಿ
ಬೇರೆಯೇ ಲೋಕದ ಜನ
ತಿನ್ನುವವರೆಂಬಷ್ಟು ಅಪರಿಚಿತವಾಗಿ
ಹೋಗಿದ್ದ ಜಾಮೂನು ಅಚಾನಕ್ಕಾಗಿ
ಅದೃಷ್ಟದಿಂದ ಆಕೆಗೆ ಸಿಕ್ಕಿದಾಗ
ಅದು ಚಂದ್ರ ಅಪಹಾಸ್ಯ ಮಾಡಿ
ನಗುವ ನಡುರಾತ್ರಿ!

ಮಗುವಿನ ಕನಸನ್ನಲ್ಲಾಡಿಸಿ
ಎಬ್ಬಿಸಿ ತಿನ್ನಿಸಿ
ತಾನು ಖುಷಿಪಟ್ಟಾಗ
ಮಗುವಿನ ಕಣ್ಣಲ್ಲೂ ಅಂದು ಹುಣ್ಣಿಮೆ!
ಹಸಿವಿನ
ಜೋಗುಳ ಹಾಡಿಕೊಂಡೇ
ನಿದಿರಿಸಿದ ಅವ್ವನ ಕನಸಲ್ಲಿ
ಕೊಟ್ಟ ಖುಷಿಯ ಜಾತ್ರೆ
ಬೆಳಗಾತನೆದ್ದು ಕನಸ ಮಧ್ಯದಲ್ಲೇ
ಜಾಮೂನು ತಿಂದು ತೇಗಿದ್ದ ಮಗ
ಅದರ ರುಚಿಯ ನೆನಪಾಗದೇ ಹಲುಬಿದ್ದಾನೆ,
ಬೆಳಿಗ್ಗೆ ಕೊಟ್ಟರಾಗದಿತ್ತೇ ಎಂದು ರೇಗಿದ್ದಾನೆ..
ತಿಂದ ಜಾಮೂನಿನ ರುಚಿ
ಹೇಗಿದ್ದಿರಬಹುದು ಎಂದೂಹೆ ಮಾಡುತ್ತಾ
ಮಗನಿದ್ದರೆ
ಕೈಯ್ಯಲ್ಲಿದ್ದ ಚಂದಿರನಂತಿದ್ದ
ಜಾಮೂನು ಮಗನ ಹೊಟ್ಟೆ ಸೇರಿಯೂ
ಅವನಿಗೆ ಸಂತೋಷವಾಗದಿದ್ದುದ್ದಕ್ಕೆ
ಅವ್ವನನ್ನು ಹಸಿವು ಸುಟ್ಟಿದೆ!

-ರಂಜಿತ್ ಅಡಿಗ, ಕುಂದಾಪುರ

ಹಾದಿಯಲಿ ಒಂದಿಷ್ಟು ಸಿಗುತ್ತದೆ ಸಾಕಷ್ಟು ಹೋಗುತ್ತದೆ ತುಲನೆ ಮಾಡಿ ನೋಡಿದರೆ ಹೋದಷ್ಟೇ ನೋವು, ಸಿಕ್ಕಷ್ಟೂ ಸಂಭ್ರಮ…
ಜನರು ಹೇಳುವರು ತಲುಪಲಾಗದು ಗುರಿಯೆಂಬುದು ಬಹಳ ದೂರ… ಅರಿವಿದೆಯೆನಗೆ ಯಾರೂ ಹೋಗರು ಸೋತು ಕೇಳಿದರೆ ಎದೆಯ ಮಾತು.. 

ಡೇರೆ ಹಾಕಿ [...]


Blog Stats

  • 13,245 hits

 

November 2009
M T W T F S S
« Aug    
 1
2345678
9101112131415
16171819202122
23242526272829
30