Posted by: uniquesupri on: August 17, 2009
- ಹೇಮಾ ಪವಾರ್, ಬೆಂಗಳೂರು
ಸ್ವಾತಂತ್ರ್ಯದ ದಿನದಲ್ಲಿ ಬರೆಯಬಹುದಾದ ಮಾಡಬಹುದಾದ ವಿಷಯಗಳು ನನಗೆ ಸ್ಪಷ್ಟವಾಗಿಲ್ಲವಾದರೂ ಈ ಸಲದ ಸ್ವಾತಂತ್ರ್ಯ ದಿನ ನನ್ನ ಪಾಲಿಗೆ ಅತಿ ಮುಖ್ಯ ದಿನ ಎನಿಸಿದ್ದರಿಂದ ಬರೆಯುತ್ತಿದ್ದೇನೆ. ಮೊದಲೆಲ್ಲಾ ಇತರೆ ರಜದ ದಿನಗಳ ಹಾಗೆ ಸ್ವಾತಂತ್ರ್ಯದಿನಾಚರಣೆಯೂ ಮುಗಿದು ಹೋಗುತ್ತಿತ್ತು ಮತ್ತು ಹಾಗೆ ಕಳೆದುಬಿಟ್ಟಿದ್ದರ ಬಗ್ಗೆ ಸಣ್ಣದೊಂದು ಗಿಲ್ಟ್ ಮನಸಲ್ಲುಳಿದುಬಿಡುತ್ತಿತ್ತು, ಈ ಸಲ ಹಾಗಾಗಲಿಲ್ಲವೆಂಬುದೇ ಖುಷಿಯ ವಿಚಾರ. [...]
Posted by: ರಂಜಿತ್ on: June 30, 2009
- ಹೇಮಾ ಪವಾರ್, ಬೆಂಗಳೂರು.
ಆತ್ಮಕತೆಗಳಲ್ಲಿ ಇರುವುದೆಲ್ಲವೂ ಸತ್ಯವಾ? ಸುಳ್ಳಾದರೂ ಅದನ್ನು ಪರೀಕ್ಷಿಸಲು ಬರದು
ಅಲ್ಲವೇ? ಅದೇಕೋ ಈ ಪ್ರಶ್ನೆ ತಲೆಯನ್ನು ಹೊಕ್ಕಿ ಕುಂತಿತು. ಇಷ್ಟಕ್ಕು ಒಬ್ಬ ಮನುಷ್ಯ
ತನ್ನ ಆತ್ಮಕತೆಯಲ್ಲಿ ಸತ್ಯವನ್ನೇ ನುಡಿಯಬೇಕೆಂದು ಅಪೇಕ್ಷಿಸುವುದೇ ದೊಡ್ಡ ಮೂರ್ಖತನ.
ಸತ್ಯಕ್ಕೊಂದು ಪರಿಧಿ ಹಾಕಿ ಇದರಾಚೆಗಿನದೆಲ್ಲ ಸುಳ್ಳು ಎಂದು ಹೇಳಲು ಬರುವುದೇ?
ಘಟನೆಗಳು, ಅನುಭವಗಳು, ದಾಖಲಾಗುತ್ತವೆ. ಅದರ ಸತ್ಯಾಸತ್ಯತೆ ಬರೆದವರನ್ನು ಕಾಡುತ್ತದೆ.
ಆತ್ಮಸಾಕ್ಷಿಗೆ ಹೆದರುವವರೆಲ್ಲರು ಸತ್ಯವನ್ನೇ ದಾಖಲಿಸುತ್ತಾರೆ ಎಂಬ ಮಾತುಗಳೆಲ್ಲ
ಎಷ್ಟು ಸಿನಿಕವೆನ್ನಿಸತೊಡಗಿತು. ಒಂದು ಘಟನೆಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ
ತನ್ನದೇ ಅಭಿಪ್ರಾಯಗಳನ್ನು ಹೊಂದಿರುತ್ತಾನೆ, ಅದೂ ಅವನವೇ ಎಂಬುದಕ್ಕೆ ಏನು ಸಾಕ್ಷಿ
ತಂದುಕೊಡಬಲ್ಲ? [...]
Posted by: ರಂಜಿತ್ on: June 23, 2009
-ಹೇಮಾ ಪವಾರ್, ಬೆಂಗಳೂರು.
ಆತ್ಮಕತೆಗಳ ಬೆನ್ನು ಬಿದ್ದಿದ್ದೇನೆ. ಕಳೆದ ಎರೆಡು ತಿಂಗಳಿಂದ ಒಂದಾದ ಮೇಲೊಂದು
ಓದುತ್ತಲೇ, ಇನ್ನು ಹೆಚ್ಚು ಹೆಚ್ಚು ಆತ್ಮಕತೆಗಳನ್ನೇ ಓದಬೇಕೆನಿಸಿದೆ. ಒಬ್ಬ
ವ್ಯಕ್ತಿಯು ಪ್ರಾಮಾಣಿಕವಾಗಿ ತನ್ನ ಬಗ್ಗೆ ಎಲ್ಲವನ್ನು ಬರೆದುಕೊಳ್ಳಬಲ್ಲನೆ?
ನನ್ನನ್ನು ಕಾಡಿದ ಪ್ರಶ್ನೆ ಇದು. ಆತ್ಮಕತೆ ಬರೆಯುತ್ತಿರುವವರಿಗೆ ತಮ್ಮ ಬಗ್ಗೆ
ಎಲ್ಲವನ್ನೂ ಹೇಳಿಕೊಳ್ಳಲೇಬೇಕೆಂಬ ಉಮೇದು ಉಂಟಾಗುತ್ತದೆ ಹಾಗು ಹೇಳದೆ ಹೋದರೆ ಅದೊಂದು
ತರಹದ ಚಡಪಡಿಕೆ ಮತ್ತು ಕೃತಿ ಅಪೂರ್ಣವೆಂಬ ಭಾವ ಮತ್ತೆ ಮತ್ತೆ ಕಾಡುತ್ತದೆ ಎಂಬುದು
ಆತ್ಮಕತೆಗಳ ಓದಿನಲ್ಲಿ ನಾನು ಕಂಡುಕೊಂಡ ಸತ್ಯ. ಒಬ್ಬ ವ್ಯಕ್ತಿಯ ಜೀವನದ ಘಟನೆಗಳು,
ಅದಕ್ಕೆ ಆತನು ಸ್ಪಂದಿಸಿದ ರೀತಿ, [...]
Posted by: ರಂಜಿತ್ on: June 19, 2009
-ಹೇಮಾ ಪವಾರ್ , ಬೆಂಗಳೂರು.
ಮನಸು ಹೇಳಬಯಸಿದೆ ನೂರೊಂದು,
ತುಟಿಯ ಮೇಲೆ ಬಾರದಿದೆ ಮಾತೊಂದು,
ವಿದಾಯ ಗೆಳಯನೆ, ವಿದಾಯ ಗೆಳತಿಯೆ
ವಿದಾಯ ಹೇಳಬಂದಿರುವೆ ನಾನಿಂದು!
ಮತ್ತೊಮ್ಮೆ ಈ ಹಾಡು ಪದೇ ಪದೇ ನೆನಪಾಗುತ್ತಿದೆ. ಮೊದಲ ಬಾರಿಗೆ ಶಾಲೆಯಲ್ಲಿ
ಕೇಳಿದ್ದೆ, ಅವತ್ತು ನಮಗೆ ಅಂದರೆ ಆ ವರ್ಶದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಸೆಂಡ್
ಆಫ್ ಕಾರ್ಯಕ್ರಮವಿತ್ತು. ಶಾಲೆಯ ಜೀವನ ಮುಗಿಯ ಹೊರಟಿತ್ತು, ಕಾಲೇಜಿನ ಬಣ್ಣಬಣ್ಣದ
ಬದುಕು ಆ ಕಡೆ ನಿಂತು ಕೈ ಬೀಸಿ ಕರೆಯುತಿತ್ತು. ಎಷ್ಟೇ ಪ್ರಭುದ್ದವಾಗಿ ಆಲೋಚಿಸಿದರೂ,
ಸ್ಕೂಲ್ ಯುನಿಫಾರಂನಲ್ಲಿದ್ದರೆ ನಾವು ಚಿಕ್ಕವರೆಂದೇ ದೊಡ್ಡವರ (?) ಅಭಿಪ್ರಾಯ.
ದಿನಕ್ಕೊಂದು ಬಣ್ಣದ ಬಟ್ಟೆ, [...]
Posted by: uniquesupri on: May 26, 2009
- ಹೇಮಾ ಪವಾರ್, ಬೆಂಗಳೂರು
ಅದ್ಯಾಕೆ ಅಷ್ಟು ರೂಡ್ ಆಗಿ ಉತ್ತರಿಸಿದೀಯ. ಅವಳು ಹುಡುಗಿ ಗೊತ್ತಿಲ್ವ ನಿನಗೆ? ಎಂದಿದ್ದಕ್ಕೆ, ‘ಹುಡುಗಿಯಾದ್ರೆ ಎರಡು ಕೊಂಬ? ಸಮಾನತೆ ಬೇಕು ಅಂತೀರ ಮತ್ತೆ ಹೀಗೆ ರಿಸರ್ವೇಶನ್ನು ಕೇಳ್ತೀರ’ ಅಂತಂದು ನಕ್ಕಿದ್ದ. ಹೌದಲ್ವ ಹುಡುಗಿ ಎಂದ ಮಾತ್ರಕ್ಕೆ ಆಕೆಯನ್ನು ವಿಶೇಷವಾಗಿ ಉಪಚರಿಸಬೇಕಿತ್ತು ಅಂತ ನನಗನ್ನಿಸಿದ್ದೇಕೆ? ಪುರುಷರೊಡನೆ ಸಮಾನತೆ ಬಯಸುವ ನಾವು, ಇತರ ಪುರುಷರಂತೆ ನಮ್ಮನ್ನು ಕಂಡಾಗ ಸ್ತ್ರೀ ಶೋಷಣೆ [...]
Posted by: uniquesupri on: November 20, 2008
- ಹೇಮಾ ಪವಾರ್, ಬೆಂಗಳೂರು
ಬೆಳಿಗ್ಗೆಯಿಂದ ಆ ಮುಖಾನೇ ಕಾಡ್ತಿದೆ. ಸಿಗ್ನಲ್ನಲ್ಲಿ ಸಿಂಬಳ ಸೋರುತ್ತಿರುವ ಮಗುವನ್ನು ಎತ್ತಿಕೊಂಡು ಭಿಕ್ಷೆ ಬೇಡುತ್ತಿದ್ದ ಆ ಹೆಣ್ಣಿನ ಮುಖ. ಅವಳನ್ನ ದಿನಾ ನೋಡ್ತಿದ್ದೆ, ಇವತ್ತು ಆ ಮುಖ ಪದೇ ಪದೇ ನೆನಪಾಗ್ಲಿಕ್ಕೆ ಕಾರಣ, ಪತ್ರಿಕೆಯಲ್ಲಿ ಈ ಸಿಗ್ನಲ್ ಭಿಕ್ಷುಕರ ಬಗ್ಗೆ ಓದಿದ್ದ ಲೇಖನ. ಅವರು ಮಕ್ಕಳನ್ನ ಭಿಕ್ಷೆ ಬೇಡೋಕೆ ಅಂತಾನೆ ದುಡ್ಡುಕೊಟ್ಟು ತರ್ತಾರಂತೆ!! ಒಮ್ಮೆ ಪೋಲೀಸರಿಗೆ ಸಿಕ್ಕಿಹಾಕಿಕೊಂಡ ಒಬ್ಬ ಭಿಕ್ಷುಕಿಯ ಸೆರಗಿನ ಗಂಟಲ್ಲಿ ಭರ್ತಿ ನಲವತ್ತು ಸಾವಿರ ಸಿಕ್ತಂತೆ!! ಇದೆಲ್ಲ ನಿಜವಾ? ಅವಳ [...]
Posted by: uniquesupri on: September 30, 2008
- ಹೇಮಾ ಪವಾರ್, ಬೆಂಗಳೂರು
“ಅಲ್ಲವೇ ನೋಡಿದ್ರೇನೆ ಗೊತ್ತಾಗುತ್ತೆ ಜೊಲ್ಲು ಅಂತ ಅದು ಹೇಗೆ ಮಾತಾಡ್ತೀಯಾ ಅವನ ಜೊತೆ ? ಅದೇನು ಅಷ್ಟೊಂದು ಹಲ್ಲು ಗಿಂಜತಾನೆ? irritate ಆಗಲ್ವಾ ನಿಂಗೆ?” ಅಂದೆ.
“ಯಾಕಾಗಬೇಕು? ” ತಣ್ಣಗೆ ಅಂದಳವಳು.
“He is a flirt !!” ತುಸು ಜೋರಾಗೇ ಅಂದೇ ನಾನು.
“ಛೇ! ನಿನಗೆ ಗೊತ್ತಿಲ್ವೇ ಅವ್ನು ಫ್ಲರ್ಟ್ ಅಲ್ಲ. ಅವ್ನಿಗೆ ಹುಡುಗಿಯರ ಶೋಕಿ ಇದೆ
ಅಷ್ಟೇ. ಫ್ಲರ್ಟ್ ಮಾಡೋ ಕ್ವಾಲಿಟೀಸ್ ಇಲ್ಲ!!!”
“ಫ್ಲರ್ಟ್ ಮಾಡೋಕೂ ಕ್ವಾಲಿಟೀಸ್ ಬೇಕಾ?” ಇಷ್ಟಗಲ [...]
Recent Comments