ಕಲರವ

ವಾರಾಂತ್ಯದ ಕವಿತೆ: ಈರುಳ್ಳಿ

Posted on: ಜುಲೈ 31, 2009

– ರಂಜಿತ್ ಅಡಿಗ, ಕುಂದಾಪುರ.

ಒಮ್ಮೆಯಾದರೂ ಈ ಸಂಬಂಧಗಳಾಳಕ್ಕೆ
ಇಣುಕಲೇ ಬೇಕು

ಅದು ಈರುಳ್ಳಿ ಸಿಪ್ಪೆ ಸುಲಿದಂತೆ

ಮೊನ್ನೆಮೊನ್ನೆಯವರೆಗೂ ತನ್ನ
ಜೀವಕ್ಕಿಂತ ಹೆಚ್ಚು ಪ್ರೀತಿಸ್ತೀನಿ ಅಂತ
ಒದ್ದೆ ಕಣ್ಣಾಲಿಗಳಿಂದ ಹೇಳಿದ ಗೆಳತಿ
4tmbಕಮ್ಮಿ ಮಾರ್ಕ್ಸು ಬಂದರೆ
ಮನೆಯಿಂದ ಓಡಿಸ್ತೀನಿ ಎಂದು
ಸಿಕ್ಕಾಪಟ್ಟೆ ಬೈದ ಅಪ್ಪ

ಕ್ಯಾಂಪಸ್ಸಿನಲ್ಲಿ ಕೆಲಸ
ಸಿಗಲಿಲ್ಲವೆಂದೊಮ್ಮೆ ಸುಮ್ಮನೆ
ಪರೀಕ್ಷೆ ಮಾಡಲು ಹೇಳಿದ ಕೂಡಲೇ
ಕೆಲಸ ಸಿಗದವನನ್ನು ಮದ್ವೆಯಾಗ್ತೀನಂತ
ಹ್ಯಾಗೆ ತನ್ನಪ್ಪನನ್ನು ಒಪ್ಪಿಸಬೇಕು
ನೀ ನನ್ನ ಮರೆಯಲೇಬೇಕು
ಎಂದು ತನ್ನ ಜೀವವನ್ನೇ ಕಡೆಗಣಿಸಿದಳಾಕೆ

ಮನೆಯನ್ನು ಒತ್ತೆಯಿಡೋಣ
ರಿಟಾಯರ್ಮೆಂಟ್ ಹಣವೂ ಬರಬಹುದು
ಸ್ವಂತ ಬಿಸಿನೆಸ್ಸು ಆರಂಭಿಸು ಮಗನೇ ಅನ್ನುವನು ಅಪ್ಪ

ಎರಡೂ ಮಾತಿಗೂ ಉಕ್ಕಿದ್ದು
ಕಣ್ಣೆದುರಿಗಿನ
ಪರದೆ ಜಾರಿಸೋ ಕಣ್ಣಿರೇ.

ನಿಮ್ಮದೊಂದು ಉತ್ತರ

Fill in your details below or click an icon to log in:

WordPress.com Logo

You are commenting using your WordPress.com account. Log Out /  ಬದಲಿಸಿ )

Twitter picture

You are commenting using your Twitter account. Log Out /  ಬದಲಿಸಿ )

Facebook photo

You are commenting using your Facebook account. Log Out /  ಬದಲಿಸಿ )

Connecting to %s

Blog Stats

  • 71,866 hits
ಜುಲೈ 2009
ಸೋಮ ಮಂಗಳ ಬುಧ ಗುರು ‍ಶು ಶನಿ ಭಾನು
 12345
6789101112
13141516171819
20212223242526
2728293031  

Top Clicks

  • ಯಾವುದೂ ಇಲ್ಲ
%d bloggers like this: